Karnataka #Vijayapura #Lake

Karnataka #Vijayapura #Lake
ವಿಜಯಪುರ : ನಗರದ ಭೂತನಾಳ ಕೆರೆಯಲ್ಲಿ ಮೂವರು ಬೆಂಗಳೂರಿನ ಪ್ರವಾಸಿಗರು ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ…
ದಾರುಣ ಘಟನೆಯಲ್ಲಿ ಬೆಂಗಳೂರು ಮೂಲದ ಮೂವರು ಪ್ರವಾಸಿಗರು ಮುಳುಗಿ ಮೃತಪಟ್ಟಿದ್ದು
ಅಧಿಕಾರಿಗಳ ಮಾಹಿತಿ ಪ್ರಕಾರ ಮೃತಪಟ್ಟವರು ಪ್ರವಾಸಕ್ಕಾಗಿ ವಿಜಯಪುರಕ್ಕೆ ಆಗಮಿಸಿದ್ದು, ಕೆರೆಯಲ್ಲಿ ಈಜಲು ಇಳಿದಿದ್ದರು. ಈ ವೇಳೆ ಆಳವಾದ ನೀರಿನ ಪ್ರದೇಶಕ್ಕೆ ತೆರಳಿದ ಪರಿಣಾಮ ನಿಯಂತ್ರಣ ಕಳೆದುಕೊಂಡು ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿ ಸಾಕಷ್ಟು ಪರಿಶ್ರಮದ ನಂತರ ಮೂವರ ಮೃತದೇಹಗಳನ್ನು ನೀರಿನಿಂದ ಹೊರತೆಗೆದಿದ್ದಾರೆ.
ಮೃತರನ್ನು ಮಹಮ್ಮದ್ ಹಯಾತ್ (12), ಮಹಮ್ಮದ್ ಹೈದರ (32) ಮತ್ತು ಅಬ್ದುಲ್ ಖುದ್ದೂಸ್ (35) ಎಂದು ಗುರುತಿಸಲಾಗಿದೆ. ಇವರೆಲ್ಲ ಬೆಂಗಳೂರಿನ ನಿವಾಸಿಗಳಾಗಿದ್ದು, ಸ್ಥಳಕ್ಕೆ
ಆದರ್ಶ ನಗರ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು, ಘಟನೆಯ ಕುರಿತು ಮುಂದಿನ ತನಿಖೆ ಕೈಗೊಂಡಿದ್ದಾರೆ…