testtest second

test content
  • About Us
  • Contact us
  • Terms and Conditions
  • Privacy policy
Tuesday, June 9, 2026
Retail
Advertisement
Advertise
  • ರಾಜ್ಯ
  • ರಾಜಕೀಯ
  • ರಾಷ್ಟ್ರ
  • ಕ್ರೀಡೆ
  • ಜೀವನಶೈಲಿ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಆರೋಗ್ಯ
  • ವಿದೇಶ
  • ವಿಶೇಷ ಕಥೆಗಳು
  • ವ್ಯಾಪಾರ
  • ಶಿಕ್ಷಣ
  • ಸ್ಥಳೀಯ
No Result
View All Result
Namu
  • ರಾಜ್ಯ
  • ರಾಜಕೀಯ
  • ರಾಷ್ಟ್ರ
  • ಕ್ರೀಡೆ
  • ಜೀವನಶೈಲಿ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಆರೋಗ್ಯ
  • ವಿದೇಶ
  • ವಿಶೇಷ ಕಥೆಗಳು
  • ವ್ಯಾಪಾರ
  • ಶಿಕ್ಷಣ
  • ಸ್ಥಳೀಯ
Nammura Suddi
Home Blog

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವಾಗಲೂ ಎಚ್ಚರದಿಂದಿರಲು ಶಾಸಕರಿಗೆ ಸಲಹೆ

by nammurasuddi Online
April 15, 2026
in Blog

YOU MAY ALSO LIKE

ವಿಜಯಪುರದಲ್ಲಿ ಬುದ್ಧ ಜಯಂತಿ ಆಚರಣೆ

ಪ್ರಿಯಾಂಕಾ ಬನಸೋಡೆ ಪಿಎಚ್‌ಡಿ ಪದವಿ ಪ್ರದಾನ..!

“ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿರುತ್ತಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ಸದಾಶಿವನಗರದ ತಮ್ಮ ನಿವಾಸ ಹಾಗೂ ಕೆಪಿಸಿಸಿ ಕಚೇರಿ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ನಸೀರ್ ಅಹ್ಮದ್ ಬಿಡುಗಡೆ ಮಾಡಿ ಮುಖ್ಯಮಂತ್ರಿಗಳು ಆದೇಶ ಹೊರಡಿಸಿರುವ ಬಗ್ಗೆ ಕೇಳಿದಾಗ, “ನಜೀರ್ ಅವರಿಗೆ ದಾವಣಗೆರೆ ದಕ್ಷಿಣ ವಿಧಾನಸಭೆ ಕ್ಷೇತ್ರಕ್ಕೆ ಹೋಗಿ ಬಂಡಾಯ ಅಭ್ಯರ್ಥಿ ಹಿಂದೆ ಸರಿಯುವಂತೆ ಮಾಡಲು ಪಕ್ಷ ಸೂಚಿಸಿತ್ತು. ಅವರು ಈ ಜವಾಬ್ದಾರಿ ನಿಭಾಯಿಸುವಲ್ಲಿ ವಿಫಲರಾಗಿದ್ದಾರೆ. ಅಲ್ಲಿ ಏನಾಗಿದೆ ಎಂದು ನನಗೆ ಇನ್ನು ವರದಿ ಬರಬೇಕಿದೆ” ಎಂದರು.*ಪಕ್ಷದಲ್ಲಿ ಶಿಸ್ತು ಮುಖ್ಯ*ಪಕ್ಷ ವಿರೋಧಿ ಚಟುವಟಿಕೆ ಮಾಡುವವರಿಗೆ ಇದು ಸಂದೇಶವೇ ಎಂದು ಕೇಳಿದಾಗ, “ಯಾವುದೇ ಪಕ್ಷವಾದರೂ ಶಿಸ್ತು ಬಹಳ ಮುಖ್ಯ. ಎಲ್ಲರನ್ನು ವಿಶ್ವಾಸಕ್ಕೆ ಪಡೆದುಕೊಂಡೇ ಅಭ್ಯರ್ಥಿ ಆಯ್ಕೆ ಮಾಡಿದ್ದೆವು. ನಂತರ ನಾವು ಎಲ್ಲಾ ನಾಯಕರೊಂದಿಗೆ ನಿತ್ಯ ಸಂಪರ್ಕದಲ್ಲಿದ್ದೆವು. ನಮ್ಮ ನಾಯಕರ ವರದಿಗಳ ಆಧಾರದ ಮೇಲೆ ಮುಖ್ಯಮಂತ್ರಿಗಳು ತೀರ್ಮಾನ ತೆಗೆದುಕೊಂಡಿದ್ದಾರೆ” ಎಂದರು.ಜಮೀರ್ ಅವರ ವಿರುದ್ಧವೂ ಶಿಸ್ತು ಕ್ರಮ ಜರುಗಿಸಲಾಗುವುದೇ ಎಂದು ಕೇಳಿದಾಗ, “ಇದರ ಬಗ್ಗೆ ನನಗೆ ಮಾಹಿತಿ ಇಲ್ಲ”ಚೆನ್ನೈಗೆ ಮತ್ತೆ ಪ್ರಯಾಣ ಮಾಡುತ್ತೀರಾ ಎಂದು ಕೇಳಿದಾಗ, “ಇಂದು ರಾತ್ರಿ ಚೆನ್ನೈಗೆ ಪ್ರಯಾಣ ಮಾಡುತ್ತಿದ್ದು, ಬುಧವಾರ ಚುನಾವಣಾ ಪ್ರಚಾರ ಕಾರ್ಯಕ್ರಮವಿದೆ” ಎಂದರು.*ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆ ಬಗ್ಗೆ ಶಾಸಕರೊಂದಿಗೆ ಚರ್ಚೆ*ನೀವು ಶಾಸಕರನ್ನು ಒಬ್ಬೊಬ್ಬರನ್ನೇ ಕರೆದು ಚರ್ಚೆ ಮಾಡುತ್ತಿದ್ದೀರಿ ಎಂಬ ಚರ್ಚೆ ಬಗ್ಗೆ ಕೇಳಿದಾಗ, “ರಾಜಕಾರಣ ಮಾಡುವಾಗ ನಾವು ನಮ್ಮ ಶಾಸಕರ ಜತೆ ಚರ್ಚೆ ಮಾಡಿ ಭವಿಷ್ಯ ರೂಪಿಸುವ ಬಗ್ಗೆ ಚರ್ಚೆ ಮಾಡಬೇಕಲ್ಲವೇ. ಯಾರಿಗೆ ಏನು ಹೇಳಬೇಕು, ಯಾರಿಗೆ ಯಾವ ಮಾರ್ಗದರ್ಶನ ನೀಡಬೇಕು ಮಾಡುತ್ತೇವೆ. ಪಾಲಿಕೆ ಚುನಾವಣೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ಬಗ್ಗೆ ಚರ್ಚೆ ಮಾಡುವುದು ಪಕ್ಷದ ಅಧ್ಯಕ್ಷನಾಗಿ ನನ್ನ ಕರ್ತವ್ಯ. ಈ ಕೆಲಸ ನಾನು ಮಾಡದೇ ಬೇರೆ ಯಾರು ಮಾಡುತ್ತಾರೆ? ಇನ್ನು ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಏನಾಗಿದೆ ಎಂದು ಶಾಸಕರು ವರದಿ ನೀಡುತ್ತಿದ್ದಾರೆ” ಎಂದು ತಿಳಿಸಿದರು.*ಎಚ್ಚರವಾಗಿರಲು ಶಾಸಕರಿಗೆ ಸಲಹೆ*ಶಾಸಕರಿಗೆ ನೇರವಾಗಿ ಎಚ್ಚರಿಕೆ ನೀಡಿರುವ ಬಗ್ಗೆ ಕೇಳಿದಾಗ, “ಶಾಸಕರು ದೆಹಲಿಗೆ ಹೋಗಿರುವುದು, ಮಂತ್ರಿ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ. ಅವರು ತಮ್ಮ ಬೇಡಿಕೆ ಕೇಳಲಿ. ಆದರೆ ಪಕ್ಷಕ್ಕೆ ಶಿಸ್ತಿನಿಂದ ಇರಬೇಕು ಅಷ್ಟೇ. ಅವರೆಲ್ಲರೂ ನಮ್ಮ ಸಹೋದ್ಯೋಗಿಗಳು. ಹೀಗಾಗಿ ಅವರಿಗೆ ಶಿಸ್ತು ಕಾಪಾಡುವಂತೆ ಮನವಿ ಮಾಡಿದ್ದೇನೆ. ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡುವಾಗ ಎಚ್ಚರಿಕೆಯಿಂದ ಇರಿ ಎಂದು ಸಲಹೆ ನೀಡಿದ್ದೇನೆ” ಎಂದರು.

Share196Tweet123

Search

No Result
View All Result

Recent News

ವಿಜಯಪುರದಲ್ಲಿ ಬುದ್ಧ ಜಯಂತಿ ಆಚರಣೆ

ಪ್ರಿಯಾಂಕಾ ಬನಸೋಡೆ ಪಿಎಚ್‌ಡಿ ಪದವಿ ಪ್ರದಾನ..!

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವಾಗಲೂ ಎಚ್ಚರದಿಂದಿರಲು ಶಾಸಕರಿಗೆ ಸಲಹೆ

Nammura Suddi

ನಮ್ಮೂರ ಸುದ್ದಿ ವಿಶ್ವಾಸಾರ್ಹ ಕನ್ನಡ ಡಿಜಿಟಲ್ ನ್ಯೂಸ್ ವೇದಿಕೆಯಾಗಿದ್ದು, ರಾಜ್ಯ, ರಾಷ್ಟ್ರ ಮತ್ತು ಜಗತ್ತಿನ ಪ್ರಮುಖ ಸುದ್ದಿಗಳನ್ನು ನಿಖರವಾಗಿ ತಲುಪಿಸುತ್ತದೆ.
ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ ನಮ್ಮೂರಿನ ಧ್ವನಿಯಾಗಿ ಕಾರ್ಯನಿರ್ವಹಿಸುತ್ತೇವೆ.
ಸತ್ಯ ಮತ್ತು ನಿಷ್ಪಕ್ಷಪಾತತೆಯೇ ನಮ್ಮ ಗುರುತು.

Recent News22

  • ವಿಜಯಪುರದಲ್ಲಿ ಬುದ್ಧ ಜಯಂತಿ ಆಚರಣೆ
  • ಪ್ರಿಯಾಂಕಾ ಬನಸೋಡೆ ಪಿಎಚ್‌ಡಿ ಪದವಿ ಪ್ರದಾನ..!
  • ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವಾಗಲೂ ಎಚ್ಚರದಿಂದಿರಲು ಶಾಸಕರಿಗೆ ಸಲಹೆ
  • ಮಹಿಳಾ ಮೀಸಲಾತಿ ಸಂಭ್ರಮದ ಕ್ಷಣ: ಮಾಳವಿಕಾ ಅವಿನಾಶ್
  • “ರುದ್ರ ಕಾಲ” ಚಿತ್ರಕ್ಕೆ ದಿಗಂತ್ ನಾಯಕ ‌ ‌‌‌

Quick Links

dfef
  • About Us
  • Contact us
  • Terms and Conditions
  • Privacy policy

© 2026 Nammura Sudhi. All Rights Reserved. Developed by Onecorpus Techworks

No Result
View All Result
  • ರಾಜ್ಯ
  • ರಾಜಕೀಯ
  • ರಾಷ್ಟ್ರ
  • ಕ್ರೀಡೆ
  • ಜೀವನಶೈಲಿ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಆರೋಗ್ಯ
  • ವಿದೇಶ
  • ವಿಶೇಷ ಕಥೆಗಳು
  • ವ್ಯಾಪಾರ
  • ಶಿಕ್ಷಣ
  • ಸ್ಥಳೀಯ

© 2026 Nammura Sudhi. All Rights Reserved. Developed by Onecorpus Techworks