testtest second

test content
  • About Us
  • Contact us
  • Terms and Conditions
  • Privacy policy
Tuesday, June 9, 2026
Retail
Advertisement
Advertise
  • ರಾಜ್ಯ
  • ರಾಜಕೀಯ
  • ರಾಷ್ಟ್ರ
  • ಕ್ರೀಡೆ
  • ಜೀವನಶೈಲಿ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಆರೋಗ್ಯ
  • ವಿದೇಶ
  • ವಿಶೇಷ ಕಥೆಗಳು
  • ವ್ಯಾಪಾರ
  • ಶಿಕ್ಷಣ
  • ಸ್ಥಳೀಯ
No Result
View All Result
Namu
  • ರಾಜ್ಯ
  • ರಾಜಕೀಯ
  • ರಾಷ್ಟ್ರ
  • ಕ್ರೀಡೆ
  • ಜೀವನಶೈಲಿ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಆರೋಗ್ಯ
  • ವಿದೇಶ
  • ವಿಶೇಷ ಕಥೆಗಳು
  • ವ್ಯಾಪಾರ
  • ಶಿಕ್ಷಣ
  • ಸ್ಥಳೀಯ
Nammura Suddi
Home Blog

371 ಜೆ ತಿದ್ದುಪಡಿಯಿಂದ ಪ್ರಗತಿಯ ಪಥದಲ್ಲಿ ಕಲ್ಯಾಣ ಕರ್ನಾಟಕ: ಈಶ್ವರ ಖಂಡ್ರೆ

by nammurasuddi Online
April 13, 2026
in Blog

YOU MAY ALSO LIKE

ವಿಜಯಪುರದಲ್ಲಿ ಬುದ್ಧ ಜಯಂತಿ ಆಚರಣೆ

ಪ್ರಿಯಾಂಕಾ ಬನಸೋಡೆ ಪಿಎಚ್‌ಡಿ ಪದವಿ ಪ್ರದಾನ..!

ಬೀದರ್ : 371 ಜೆ ಸಾಂವಿಧಾನಿಕ ತಿದ್ದುಪಡಿಯಿಂದಾಗಿ ಕಲ್ಯಾಣ ಕರ್ನಾಟಕ ಪ್ರಗತಿಯ ಪಥದಲ್ಲಿ ಸಾಗುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.ಬೀದರ್ ನ ಝೀರಾ ಕನ್ವೆನ್ಷನ್ ಹಾಲ್ ನಲ್ಲಿ ನಡೆದ 2 ದಿನಗಳ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಈ ಭಾಗದ ಅಭಿವೃದ್ಧಿಗೆ ಮಾಧ್ಯಮಗಳು ಸಲಹೆ ನೀಡುವ ಮೂಲಕ ಸಹಕಾರ ನೀಡಬೇಕು ಎಂದರು.ಅಭಿವ್ಯಕ್ತಿ ಸ್ವಾತಂತ್ರ್ಯದ ನೆಲೆಗಟ್ಟಿನಲ್ಲಿ ಮಾಧ್ಯಮಗಳು ಕಾರ್ಯನಿರ್ವಹಿಸುತ್ತಿದ್ದು, ಪತ್ರಿಕಾ ಸ್ವಾತಂತ್ರ್ಯ ಪತ್ರಕರ್ತರಿಗೆ ಜೀವಾಳವಾಗಿದೆ ಎಂದ ಅವರು, ಎಲ್ಲ ಕ್ಷೇತ್ರದಲ್ಲೂ ಸ್ಪರ್ಧೆ ಇದೆ. ಮಾಧ್ಯಮ ರಂಗದಲ್ಲೂ ಸ್ಪರ್ಧೆ ಇದೆ. ನಾವೇ ಮೊದಲು ಎಂಬ ಧಾವಂತದಲ್ಲಿ ಅಸತ್ಯವಾದ ಸುದ್ದಿಗಳು, ಆಧಾರ ರಹಿತ ಸುದ್ದಿಗಳು ಬಿತ್ತರವಾಗದಂತೆ ಮಾಧ್ಯಮಗಳು ಎಚ್ಚರ ವಹಿಸಬೇಕು ಎಂದು ಹೇಳಿದರು.ಜನಾಭಿಪ್ರಾಯ ಮೂಡಿಸುವಲ್ಲಿ ಮಾಧ್ಯಮಗಳ ಪಾತ್ರ ಹಿರಿದಾಗಿದೆ. ಪತ್ರಕರ್ತರ ಮುಂದೆ ಸವಾಲುಗಳಿವೆ. ಕಷ್ಟದ ಪರಿಸ್ಥಿತಿಯಲ್ಲಿ ಕಾರ್ಯನಿರ್ವಹಿಸುವ ಪತ್ರಕರ್ತರಿಗೆ ರಕ್ಷಣೆ ನೀಡುವ ನೀಟ್ಟಿನಲ್ಲಿ ಸರ್ಕಾರ ಸ್ಪಂದಿಸಲಿದೆ ಎಂದರು. ಮಾಧ್ಯಮಗಳು ಸಮಾಜದ ಓರೆ, ಕೋರೆಯನ್ನು ಎತ್ತಿ ತೋರಿಸುವುದರ ಜೊತೆಗೆ ಜನರಲ್ಲಿ ಜಾಗೃತಿ ಮೂಡುತ್ತಿದ್ದವು. 20-30 ವರ್ಷಗಳ ಹಿಂದೆ ಪತ್ರಿಕೆಯಲ್ಲಿ ಯಾವುದಾದರೂ ಅಧಿಕಾರಿಯ, ಜನಪ್ರತಿನಿಧಿ ಭ್ರಷ್ಟಾಚಾರಿ ಎಂದು ಪ್ರಕಟವಾದರೆ ಅವರು ಕುಗ್ಗಿ ಹೋಗುತ್ತಿದ್ದರು. ಸಮಾಜ ಅವರನ್ನು ನಿಕೃಷ್ಟವಾಗಿ ಕಾಣುತ್ತಿತ್ತು. ಹೀಗಾಗಿ ಮಾಧ್ಯಮಗಳು ಅದೇ ಹಿಂದಿನ ವಿಶ್ವಾಸಾರ್ಹತೆ ಗಳಿಸಬೇಕು ಎಂದರು.ಮಾಧ್ಯಮಗಳು ಸಮಾಜದ ನಾಲ್ಕನೇ ಅಂಗವಾಗಿವೆ. ಇಂದು ರಾಜ್ಯದಲ್ಲಿ ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವನಾಗಿ ನಾನು ಕಾರ್ಯ ನಿರ್ವಹಿಸುತ್ತಿದ್ದೇನೆ. ಇಂದು ರಾಜ್ಯದಲ್ಲಿ ಪ್ರಕೃತಿ, ಪರಿಸರ ಹಾಗೂ ಅರಣ್ಯ ಉಳಿದಿದ್ದರೆ ಅದರಲ್ಲಿ ಮಾಧ್ಯಮಗಳ ಪಾತ್ರವೂ ಹಿರಿದಾಗಿದೆ ಎಂದರು.ಈ ಸಮ್ಮೇಳನದಲ್ಲಿ ವಿವಿಧ ಗೋಷ್ಠಿಗಳು ಇಲ್ಲಿ ಯಶಸ್ವಿಯಾಗಿ ನಡೆದಿದ್ದು, ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಮತ್ತು ಮಾಧ್ಯಮ ಕುರಿತಂತೆ ಹಾಗೂ ಗಡಿ ಭಾಗದ ಸಮಸ್ಯೆಗಳ ಬಗ್ಗೆ ಸಹ ಇಲ್ಲಿ ಚಿಂತನ ಮಂಥನ ಆಗಿರುವುದು ಸಂತೋಷದ ವಿಷಯವಾಗಿದೆ ಎಂದರು.ಯಾವುದೇ ಮಾಧ್ಯಮಕ್ಕೆ ತನ್ನ ವಿಶ್ವಾಸಾರ್ಹತೆಯೇ ಜೀವಾಳ. ಅದೇ ರೀತಿ ಪತ್ರಕರ್ತರಿಗೆ ಪತ್ರಿಕಾ ಸ್ವಾತಂತ್ರ್ಯವೇ ಪ್ರಾಣವಾಯು. ನೀವೆಲ್ಲರೂ ಸಮಾಜದ ಒಳಿತಿಗಾಗಿ ಕೆಲಸ ಮಾಡಿ, ಸಮಾಜಕ್ಕೆ ಹಿತವಾದ ಸುದ್ದಿ, ವರದಿ ಪ್ರಕಟಿಸಿ ಎಂದು ಹೇಳಿ, 40ನೇ ಪತ್ರಕರ್ತರ ಸಮ್ಮೇಳನದ ಯಶಸ್ಸಿಗೆ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಈಶ್ವರ ಬಿ ಖಂಡ್ರೆ ಅವರನ್ನು ಕೆ.ಯು.ಡಬ್ಲ್ಯು.ಜೆ. ವತಿಯಿಂದ ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್, ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್, ಶಾಸಕರುಗಳಾದ ಡಾ. ಶೈಲೇಂದ್ರ ಬೆಲ್ದಾಳೆ, ಶರಣು ಶಲಗಾರ್, ಸಿದ್ದು ಪಾಟೀಲ್, ಎಂ.ಜಿ.ಮೂಳೆ, ಮಾಜಿ ಶಾಸಕರಾದ ಬಂಡೆಪ್ಪ ಖಾಶೆಂಪೂರ್, ಕೆ.ಯು.ಡಬ್ಲ್ಯು.ಜೆ. ಅಧ್ಯಕ್ಷ ಶಿವಾನಂದ ತಗಡೂರ್ ಮತ್ತಿತರರು ಪಾಲ್ಗೊಂಡಿದ್ದರು.

Share197Tweet123

Search

No Result
View All Result

Recent News

ವಿಜಯಪುರದಲ್ಲಿ ಬುದ್ಧ ಜಯಂತಿ ಆಚರಣೆ

ಪ್ರಿಯಾಂಕಾ ಬನಸೋಡೆ ಪಿಎಚ್‌ಡಿ ಪದವಿ ಪ್ರದಾನ..!

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವಾಗಲೂ ಎಚ್ಚರದಿಂದಿರಲು ಶಾಸಕರಿಗೆ ಸಲಹೆ

Nammura Suddi

ನಮ್ಮೂರ ಸುದ್ದಿ ವಿಶ್ವಾಸಾರ್ಹ ಕನ್ನಡ ಡಿಜಿಟಲ್ ನ್ಯೂಸ್ ವೇದಿಕೆಯಾಗಿದ್ದು, ರಾಜ್ಯ, ರಾಷ್ಟ್ರ ಮತ್ತು ಜಗತ್ತಿನ ಪ್ರಮುಖ ಸುದ್ದಿಗಳನ್ನು ನಿಖರವಾಗಿ ತಲುಪಿಸುತ್ತದೆ.
ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ ನಮ್ಮೂರಿನ ಧ್ವನಿಯಾಗಿ ಕಾರ್ಯನಿರ್ವಹಿಸುತ್ತೇವೆ.
ಸತ್ಯ ಮತ್ತು ನಿಷ್ಪಕ್ಷಪಾತತೆಯೇ ನಮ್ಮ ಗುರುತು.

Recent News22

  • ವಿಜಯಪುರದಲ್ಲಿ ಬುದ್ಧ ಜಯಂತಿ ಆಚರಣೆ
  • ಪ್ರಿಯಾಂಕಾ ಬನಸೋಡೆ ಪಿಎಚ್‌ಡಿ ಪದವಿ ಪ್ರದಾನ..!
  • ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವಾಗಲೂ ಎಚ್ಚರದಿಂದಿರಲು ಶಾಸಕರಿಗೆ ಸಲಹೆ
  • ಮಹಿಳಾ ಮೀಸಲಾತಿ ಸಂಭ್ರಮದ ಕ್ಷಣ: ಮಾಳವಿಕಾ ಅವಿನಾಶ್
  • “ರುದ್ರ ಕಾಲ” ಚಿತ್ರಕ್ಕೆ ದಿಗಂತ್ ನಾಯಕ ‌ ‌‌‌

Quick Links

dfef
  • About Us
  • Contact us
  • Terms and Conditions
  • Privacy policy

© 2026 Nammura Sudhi. All Rights Reserved. Developed by Onecorpus Techworks

No Result
View All Result
  • ರಾಜ್ಯ
  • ರಾಜಕೀಯ
  • ರಾಷ್ಟ್ರ
  • ಕ್ರೀಡೆ
  • ಜೀವನಶೈಲಿ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಆರೋಗ್ಯ
  • ವಿದೇಶ
  • ವಿಶೇಷ ಕಥೆಗಳು
  • ವ್ಯಾಪಾರ
  • ಶಿಕ್ಷಣ
  • ಸ್ಥಳೀಯ

© 2026 Nammura Sudhi. All Rights Reserved. Developed by Onecorpus Techworks